ಶ್ರೀ ಗಣೇಶ್ ಸಹಕಾರ ಬ್ಯಾಂಕ್ ನಿಯಮಿತ, ಗುಲ್ಬರ್ಗ, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ. - ಆರ್ಬಿಐ - Reserve Bank of India
ಶ್ರೀ ಗಣೇಶ್ ಸಹಕಾರ ಬ್ಯಾಂಕ್ ನಿಯಮಿತ, ಗುಲ್ಬರ್ಗ, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ತನ್ನ ಮಾರ್ಚ್ 25, 2025 ರ ಆದೇಶದ ಮೂಲಕ ಶ್ರೀ ಗಣೇಶ್ ಸಹಕಾರ ಬ್ಯಾಂಕ್ ನಿಯಮಿತ, ಗುಲ್ಬರ್ಗ, ಕರ್ನಾಟಕ - ಈ ಬ್ಯಾಂಕಿಗೆ (ಬ್ಯಾಂಕು) ರೂ. 2.50 ಲಕ್ಷ ( ರೂ. ಎರಡು ಲಕ್ಷ ಐವತ್ತು ಸಾವಿರ ಮಾತ್ರ ) ವಿತ್ತೀಯ ದಂಡ ವಿಧಿಸಿದೆ. ‘ಅನಾವರಣ ಮಾನದಂಡಗಳು ಮತ್ತು ಶಾಸನಬದ್ಧ /ಇತರ ನಿರ್ಬಂಧಗಳು - ಪೌರ ಸಹಕಾರಿ ಬ್ಯಾಂಕುಗಳು’ ಮತ್ತು ‘ಪೌರ ಸಹಕಾರಿ ಬ್ಯಾಂಕುಗಳ ಲಾಭದಿಂದ ದೇಣಿಗೆಗಳು, ಕೊಡುಗೆಗಳು/ಸಾರ್ವಜನಿಕ ಧರ್ಮಾರ್ಥ ಉದ್ದೇಶಗಳು’ – ಕುರಿತಾಗಿ ನೀಡಿದ್ದ ಕೆಲವು ನಿರ್ದೇಶನಗಳ ಅನುಪಾಲನೆ ಮಾಡದೇ ಇದ್ದುದಕ್ಕಾಗಿ ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 47 ಏ(1)(ಸಿ ) ಜೊತೆ ಓದಲಾದ ಕಲಂ 46(4) (i) ಮತ್ತು 56 ರ ಅಡಿಯಲ್ಲಿ ತನಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಈ ದಂಡವನ್ನು ವಿಧಿಸಿದೆ. ಮಾರ್ಚ್ 31, 2023 ರಂದು ಇದ್ದ ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಯನ್ನು ಆಧರಿಸಿ ಬ್ಯಾಂಕಿನ ಶಾಸನಬದ್ಧ ನಿರೀಕ್ಷಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಮಾಡಿತ್ತು. ಶಾಸನಬದ್ಧ ನಿರ್ದೇಶನಗಳ ಅನುಪಾಲನೆ ಆಗದೆ ಇರುವ ಬಗ್ಗೆ ನಿರೀಕ್ಷಣಾ ನಿಷ್ಕರ್ಷೆಯನ್ನು ಮತ್ತು ಈ ಸಂಬಂಧ ನಡೆದ ಪತ್ರ ವ್ಯವಹಾರಗಳನ್ನು ಆಧರಿಸಿ ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶನಗಳ ಅನುಪಾಲನೆ ಮಾಡುವಲ್ಲಿ ವಿಫಲವಾದುದಕ್ಕಾಗಿ ಏಕೆ ದಂಡ ವಿಧಿಸಬಾರದು ಎಂದು ಕಾರಣ ಕೇಳಿ ನೋಟೀಸನ್ನು ನೀಡಲಾಗಿತ್ತು. ಬ್ಯಾಂಕು ಈ ಕುರಿತು ಸಲ್ಲಿಸಿದ ಉತ್ತರ ಮತ್ತು ವೈಯಕ್ತಿಕ ವಿಚಾರಣೆಯಲ್ಲಿ ಮಾಡಲಾದ ಮೌಖಿಕ ನಿವೇದನೆಗಳನ್ನು ಪರಿಗಣಿಸಿದ ನಂತರ ಭಾರತೀಯ ರಿಸರ್ವ್ ಬ್ಯಾಂಕಿಗೆ, ಇತರ ವಿಷಯಗಳ ನಡುವೆ, ಬ್ಯಾಂಕಿನ ವಿರುದ್ಧ ಮಾಡಲಾದ ಕೆಳಕಂಡ ಆರೋಪಗಳು ಸ್ಥಿರಪಟ್ಟಿವೆ ಮತ್ತು ವಿತ್ತೀಯ ದಂಡ ವಿಧಿಸುವುದಕ್ಕೆ ಅರ್ಹವಾಗಿವೆ ಎಂದು ಗೊತ್ತಾಯಿತು: ಬ್ಯಾಂಕು -
ನಿಯಂತ್ರಣ ಅನುಪಾಲನೆಯಲ್ಲಿ ಕಂಡುಬಂದ ಕೊರತೆಗಾಗಿ ಮೇಲಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆಯೇ ವಿನಃ ಇದು ಬ್ಯಾಂಕು ತನ್ನ ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವ್ಯವಹಾರ ಅಥವಾ ಒಪ್ಪಂದದ ಸಿಂಧುತ್ವದ ಬಗೆಗಿನ ಘೋಷಣೆಯಲ್ಲ. ಅಲ್ಲದೆ, ಈ ವಿತ್ತೀಯ ದಂಡ ವಿಧಿಸುವ ಕ್ರಿಯೆಯು ಭಾರತೀಯ ರಿಸರ್ವ್ ಬ್ಯಾಂಕು ಈ ಬ್ಯಾಂಕಿನ ಮೇಲೆ ತೆಗೆದುಕೊಳ್ಳಬಹುದಾದ ಯಾವುದೇ ಇತರ ಕ್ರಮದ ಪೂರ್ವಾಗ್ರಹದಿಂದ ಹೊರತಾಗಿದೆ. (ಪುನೀತ್ ಪಾಂಚೋಲಿ) प्ಪತ್ರಿಕಾ ಪ್ರಕಟಣೆ: 2024-2025/2489 |