ದಿ ಕರ್ನಾಟಕ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಮುದ್ದೇಬಿಹಾಳ, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ. - ಆರ್ಬಿಐ - Reserve Bank of India
ದಿ ಕರ್ನಾಟಕ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಮುದ್ದೇಬಿಹಾಳ, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ತನ್ನ ಜೂನ್ 23, 2025 ರ ಆದೇಶದ ಮೂಲಕ ದಿ ಕರ್ನಾಟಕ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಮುದ್ದೇಬಿಹಾಳ, ಕರ್ನಾಟಕ - ಈ ಬ್ಯಾಂಕಿಗೆ (ಬ್ಯಾಂಕು) ರೂ. 1 ಲಕ್ಷ (ರೂ. ಒಂದು ಲಕ್ಷ ಮಾತ್ರ) ವಿತ್ತೀಯ ದಂಡ ವಿಧಿಸಿದೆ. ‘ಅನಾವರಣ ಮಾನದಂಡಗಳು ಮತ್ತು ಶಾಸನಬದ್ಧ /ಇತರ ನಿರ್ಬಂಧಗಳು - ಪೌರ ಸಹಕಾರಿ ಬ್ಯಾಂಕುಗಳು’ ಮತ್ತು ‘ನಿಮ್ಮ ಗ್ರಾಹಕರನ್ನು ತಿಳಿಯಿರಿ’ (KYC) ಕುರಿತಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ್ದ ಕೆಲವು ನಿರ್ದೇಶನಗಳ ಅನುಪಾಲನೆ ಮಾಡದೇ ಇದ್ದುದಕ್ಕಾಗಿ ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 47 ಎ (1)(ಸಿ ) ಜೊತೆ ಓದಲಾದ ಕಲಂ 46(4) (i) ಮತ್ತು 56 ರ ಅಡಿಯಲ್ಲಿ ತನಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಈ ದಂಡವನ್ನು ವಿಧಿಸಿದೆ. ಮಾರ್ಚ್ 31, 2024 ರಂದು ಇದ್ದ ಬ್ಯಾಂಕಿನ ಆರ್ಥಿಕ ಪರಿಸ್ಥಿತಿಯನ್ನು ಆಧರಿಸಿ ಬ್ಯಾಂಕಿನ ಶಾಸನಬದ್ಧ ನಿರೀಕ್ಷಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಮಾಡಿತ್ತು. ಆರ್ ಬಿ ಐ ನಿರ್ದೇಶನಗಳ ಅನುಪಾಲನೆ ಆಗದೆ ಇರುವ ಬಗ್ಗೆ ನಿರೀಕ್ಷಣಾ ನಿಷ್ಕರ್ಷೆಯನ್ನು ಮತ್ತು ಈ ಸಂಬಂಧ ನಡೆದ ಪತ್ರ ವ್ಯವಹಾರಗಳನ್ನು ಆಧರಿಸಿ ಬ್ಯಾಂಕಿಗೆ ಈ ನಿರ್ದೇಶನಗಳ ಅನುಪಾಲನೆ ಮಾಡುವಲ್ಲಿ ವಿಫಲವಾದುದಕ್ಕಾಗಿ ಏಕೆ ದಂಡ ವಿಧಿಸಬಾರದು ಎಂದು ಕಾರಣ ಕೇಳಿ ನೋಟೀಸನ್ನು ನೀಡಲಾಗಿತ್ತು. ಬ್ಯಾಂಕು ಈ ಕುರಿತು ಸಲ್ಲಿಸಿದ ಉತ್ತರ ಮತ್ತು ವೈಯಕ್ತಿಕ ವಿಚಾರಣೆಯಲ್ಲಿ ಮಾಡಲಾದ ಮೌಖಿಕ ನಿವೇದನೆಗಳನ್ನು ಪರಿಗಣಿಸಿದ ನಂತರ ಭಾರತೀಯ ರಿಸರ್ವ್ ಬ್ಯಾಂಕಿಗೆ, ಇತರ ವಿಷಯಗಳ ನಡುವೆ, ಬ್ಯಾಂಕಿನ ವಿರುದ್ಧ ಮಾಡಲಾದ ಕೆಳಕಂಡ ಆರೋಪಗಳು ಸ್ಥಿರಪಟ್ಟಿದೆ ಮತ್ತು ವಿತ್ತೀಯ ದಂಡ ವಿಧಿಸುವುದಕ್ಕೆ ಅರ್ಹವಾಗಿದೆ ಎಂದು ಗೊತ್ತಾಯಿತು: ಬ್ಯಾಂಕು : i) ವಿವೇಕಯುತ ಅಂತರಬ್ಯಾಂಕು (ಗ್ರೋಸ್) ಮತ್ತು ಪ್ರತಿಪಕ್ಷ ಅನಾವರಣ ಮಿತಿಯನ್ನು ಮೀರಿತ್ತು. ii) ಗ್ರಾಹಕರ ಕೆ ವೈ ಸಿ ದಾಖಲೆ ಗಳನ್ನು ಗೊತ್ತು ಪಡಿಸಿದ ಕಾಲಮಿತಿಯೊಳಗೆ ಕೇಂದ್ರೀಯ ಕೆ ವೈ ಸಿ (KYC) ದಾಖಲೆಗಳ ರಿಜಿಸ್ಟ್ರಿಗೆ (CKYCR) ಅಪ್ ಲೋಡ್ ಮಾಡಲು ವಿಫಲವಾಗಿತ್ತು. ನಿಯಂತ್ರಣ ಅನುಪಾಲನೆಯಲ್ಲಿ ಕಂಡುಬಂದ ಕೊರತೆಗಾಗಿ ಮೇಲಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆಯೇ ವಿನಃ ಇದು ಬ್ಯಾಂಕು ತನ್ನ ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವ್ಯವಹಾರ ಅಥವಾ ಒಪ್ಪಂದದ ಸಿಂಧುತ್ವದ ಬಗೆಗಿನ ಘೋಷಣೆಯಲ್ಲ. ಅಲ್ಲದೆ, ಈ ವಿತ್ತೀಯ ದಂಡ ವಿಧಿಸುವ ಕ್ರಿಯೆಯು ಭಾರತೀಯ ರಿಸರ್ವ್ ಬ್ಯಾಂಕು ಈ ಬ್ಯಾಂಕಿನ ಮೇಲೆ ತೆಗೆದುಕೊಳ್ಳಬಹುದಾದ ಯಾವುದೇ ಇತರ ಕ್ರಮದ ಪೂರ್ವಾಗ್ರಹದಿಂದ ಹೊರತಾಗಿದೆ. (ಪುನೀತ್ ಪಾಂಚೋಲಿ) ಪತ್ರಿಕಾ ಪ್ರಕಟಣೆ: 2025-2026/600 |