ದಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರೀಯ ಬ್ಯಾಂಕು, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ. - ಆರ್ಬಿಐ - Reserve Bank of India
ದಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರೀಯ ಬ್ಯಾಂಕು, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ.
ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 20 ಜೊತೆ ಓದಲಾದ ಕಲಂ 56 ರ ನಿಬಂಧನೆಗಳ ಉಲ್ಲಂಘನೆಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ತನ್ನ ಮಾರ್ಚ್ 26, 2025 ರ ಆದೇಶದ ಮೂಲಕ ದಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರೀಯ ಬ್ಯಾಂಕು, ಕರ್ನಾಟಕ - ಈ ಬ್ಯಾಂಕಿಗೆ (ಬ್ಯಾಂಕು) ರೂ. 1.00 ಲಕ್ಷ ( ರೂ. ಒಂದು ಲಕ್ಷ ಮಾತ್ರ ) ವಿತ್ತೀಯ ದಂಡ ವಿಧಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 47 ಎ(1)(ಸಿ ) ಜೊತೆ ಓದಲಾದ ಕಲಂ 46(4) (i) ಮತ್ತು 56 ರ ಅಡಿಯಲ್ಲಿ ತನಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಈ ದಂಡವನ್ನು ವಿಧಿಸಿದೆ. ಮಾರ್ಚ್ 31, 2023 ರಂದು ಇದ್ದ ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಯನ್ನು ಆಧರಿಸಿ ಬ್ಯಾಂಕಿನ ಶಾಸನಬದ್ಧ ನಿರೀಕ್ಷಣೆಯನ್ನು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್- NABARD ) ಮಾಡಿತ್ತು. ಶಾಸನಬದ್ಧ ನಿರ್ದೇಶನಗಳ ಅನುಪಾಲನೆ ಆಗದೆ ಇರುವ ಬಗ್ಗೆ ನಿರೀಕ್ಷಣಾ ನಿಷ್ಕರ್ಷೆಯನ್ನು ಮತ್ತು ಈ ಸಂಬಂಧ ನಡೆದ ಪತ್ರ ವ್ಯವಹಾರಗಳನ್ನು ಆಧರಿಸಿ ಬ್ಯಾಂಕಿಗೆ, ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮದ ನಿರ್ದೇಶನಗಳ ಅನುಪಾಲನೆ ಮಾಡುವಲ್ಲಿ ವಿಫಲವಾದುದಕ್ಕಾಗಿ ಏಕೆ ದಂಡ ವಿಧಿಸಬಾರದು ಎಂದು ಕಾರಣ ಕೇಳಿ ನೋಟೀಸನ್ನು ನೀಡಲಾಗಿತ್ತು. ಬ್ಯಾಂಕು ಈ ಕುರಿತು ಸಲ್ಲಿಸಿದ ಉತ್ತರ ಮತ್ತು ವೈಯಕ್ತಿಕ ವಿಚಾರಣೆಯಲ್ಲಿ ಮಾಡಲಾದ ಮೌಖಿಕ ನಿವೇದನೆಗಳನ್ನು ಪರಿಗಣಿಸಿದ ನಂತರ ಭಾರತೀಯ ರಿಸರ್ವ್ ಬ್ಯಾಂಕಿಗೆ, ಇತರ ವಿಷಯಗಳ ನಡುವೆ, ಬ್ಯಾಂಕಿನ ವಿರುದ್ಧ ಮಾಡಲಾದ ಕೆಳಕಂಡ ಆರೋಪ ಸ್ಥಿರಪಟ್ಟಿದೆ ಮತ್ತು ವಿತ್ತೀಯ ದಂಡ ವಿಧಿಸುವುದಕ್ಕೆ ಅರ್ಹವಾಗಿದೆ ಎಂದು ಗೊತ್ತಾಯಿತು: (ಪುನೀತ್ ಪಾಂಚೋಲಿ) ಪತ್ರಿಕಾ ಪ್ರಕಟಣೆ: 2024-2025/2512 |