ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನಿಯಮಿತ, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ. - ಆರ್ಬಿಐ - Reserve Bank of India
ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನಿಯಮಿತ, ಕರ್ನಾಟಕ - ಈ ಬ್ಯಾಂಕಿಗೆ ಆರ್ ಬಿ ಐ ವಿತ್ತೀಯ ದಂಡ ವಿಧಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ತನ್ನ ಮಾರ್ಚ್ 25, 2025 ರ ಆದೇಶದ ಮೂಲಕ ‘ಮೇಲ್ವಿಚಾರಣಾ ಕ್ರಿಯಾ ಚೌಕಟ್ಟು (SAF)’ ಅಡಿಯಲ್ಲಿ ನೀಡಿದ ನಿರ್ದಿಷ್ಟ ನಿರ್ದೇಶನಗಳ ಅನುಪಾಲನೆ ಮಾಡದೇ ಇದ್ದುದಕ್ಕಾಗಿ ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನಿಯಮಿತ, ಕರ್ನಾಟಕ - ಈ ಬ್ಯಾಂಕಿಗೆ (ಬ್ಯಾಂಕು) ರೂ. 50,000/- ( ರೂ. ಐವತ್ತು ಸಾವಿರ ಮಾತ್ರ ) ವಿತ್ತೀಯ ದಂಡ ವಿಧಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ 1949 ರ ಕಲಂ 47 ಏ(1)(ಸಿ ) ಜೊತೆ ಓದಲಾದ ಕಲಂ 46(4) (i) ಮತ್ತು 56 ರ ಅಡಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ದಂಡವನ್ನು ವಿಧಿಸಿದೆ. ಮಾರ್ಚ್ 31, 2023 ರಂದು ಇದ್ದ ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಯನ್ನು ಆಧರಿಸಿ ಬ್ಯಾಂಕಿನ ಶಾಸನ ಬದ್ಧ ನಿರೀಕ್ಷಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಮಾಡಿತ್ತು. ಶಾಸನಬದ್ಧ ನಿರ್ದೇಶನಗಳ ಅನುಪಾಲನೆ ಆಗದೆ ಇರುವ ಬಗ್ಗೆ ನಿರೀಕ್ಷಣಾ ನಿಷ್ಕರ್ಷೆಯನ್ನು ಮತ್ತು ಈ ಸಂಬಂಧ ನಡೆದ ಪತ್ರ ವ್ಯವಹಾರಗಳನ್ನು ಆಧರಿಸಿ ಬ್ಯಾಂಕಿಗೆ ಈ ನಿರ್ದೇಶನಗಳ ಅನುಪಾಲನೆ ಮಾಡುವಲ್ಲಿ ವಿಫಲವಾದುದಕ್ಕಾಗಿ ಏಕೆ ದಂಡ ವಿಧಿಸಬಾರದು ಎಂದು ಕಾರಣ ಕೇಳಿ ನೋಟೀಸನ್ನು ನೀಡಲಾಗಿತ್ತು. ಬ್ಯಾಂಕು ಈ ಕುರಿತು ಸಲ್ಲಿಸಿದ ಉತ್ತರ ಮತ್ತು ವೈಯಕ್ತಿಕ ವಿಚಾರಣೆಯಲ್ಲಿ ಮಾಡಲಾದ ಮೌಖಿಕ ನಿವೇದನೆಗಳನ್ನು ಪರಿಗಣಿಸಿದ ನಂತರ ಭಾರತೀಯ ರಿಸರ್ವ್ ಬ್ಯಾಂಕಿಗೆ, ಇತರ ವಿಷಯಗಳ ನಡುವೆ, ಬ್ಯಾಂಕಿನ ವಿರುದ್ಧ ಮಾಡಲಾದ ಈ ಕೆಳಗಿನ ಆರೋಪಗಳು ಸ್ಥಿರಪಟ್ಟಿವೆ ಮತ್ತು ವಿತ್ತೀಯ ದಂಡ ವಿಧಿಸುವುದಕ್ಕೆ ಅರ್ಹವಾಗಿವೆ ಎಂದು ಗೊತ್ತಾಯಿತು: ಮೇಲ್ವಿಚಾರಣಾ ಕ್ರಿಯಾ ಚೌಕಟ್ಟು (SAF) ಅಡಿಯಲ್ಲಿ ನೀಡಲಾದ ನಿರ್ದೇಶನಗಳ ಅನುಪಾಲನೆ ಮಾಡದೆ, ಬ್ಯಾಂಕು- (i) ಆಪತ್ತು ತೂಕ 100% ಕ್ಕಿಂತ ಹೆಚ್ಚಿರುವ ಹೊಸ ಸಾಲ ಮತ್ತು ಮುಂಗಡಗಳನ್ನು ಮಂಜೂರು ಮಾಡಿತ್ತು. (ii) ಅನುತ್ಪಾದಕ ಆಸ್ತಿ ಹೆಚ್ಚಿರುವ ವಲಯಗಳಲ್ಲಿ ತನ್ನ ಅನಾವರಣವನ್ನು ಕಡಿಮೆ ಮಾಡಿರಲಿಲ್ಲ. (iii) ತನ್ನ ಕಾರ್ಯಾಚರಣೆಯ/ ಆಡಳಿತದ ವೆಚ್ಚಗಳನ್ನು ಕಡಿಮೆ ಮಾಡಿರಲಿಲ್ಲ. ನಿಯಂತ್ರಣ ಅನುಪಾಲನೆಯಲ್ಲಿ ಕಂಡುಬಂದ ಕೊರತೆಗಾಗಿ ಮೇಲಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆಯೇ ವಿನಃ ಇದು ಬ್ಯಾಂಕು ತನ್ನ ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವ್ಯವಹಾರ ಅಥವಾ ಒಪ್ಪಂದದ ಸಿಂಧುತ್ವದ ಬಗೆಗಿನ ಘೋಷಣೆಯಲ್ಲ. ಅಲ್ಲದೆ, ಈ ವಿತ್ತೀಯ ದಂಡ ವಿಧಿಸುವ ಕ್ರಿಯೆಯು ಭಾರತೀಯ ರಿಸರ್ವ್ ಬ್ಯಾಂಕು ಈ ಬ್ಯಾಂಕಿನ ಮೇಲೆ ತೆಗೆದುಕೊಳ್ಳಬಹುದಾದ ಯಾವುದೇ ಇತರ ಕ್ರಮದ ಪೂರ್ವಾಗ್ರಹದಿಂದ ಹೊರತಾಗಿದೆ. (ಪುನೀತ್ ಪಾಂಚೋಲಿ) ಪತ್ರಿಕಾ ಪ್ರಕಟಣೆ: 2024-2025/2488 |